3:04 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು

28/05/2021, 08:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. 

ಸೋಂಕಿತರಿಗೆ ಧೈರ್ಯ ತುಂಬಿದ ಅವರು ಗ್ರಾಮೀಣ ಪ್ರದೇಶದಲ್ಲಿ ಜನರು ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡ ಬೇಕು.ಮುಖಕ್ಕೆ ಮಾಸ್ಕ್ ಧರಿಸಿ ಸ್ಯಾನಿಟೈಸರ್ ನಿಂದ ತೊಳೆಯುತ್ತಾ ಜೀವ ಕಾಪಾಡಿಕೊಳ್ಳಬೇಕು ಎಂದರು.

ಕೋವಿಡ್ ಸೋಂಕಿತರು ಯಾವುದೇ ಕಾರಣಕ್ಕೆ ಧೈರ್ಯ ಕಳೆದುಕೊಳ್ಳಬಾರದು. ಭಯಪಡ ಬಾರದು. ಆಗ ಏನೂ ಆಗುವುದಿಲ್ಲ. ಹಾಗೆ ಕೋವಿಡ್ ಮುಕ್ತ ಮಾಡೋಣ ಎಂದು ಹೇಳಿದರು.

ಈ ವೇಳೆ ಸೋಂಕಿತರು, ನಮಗೆ ಇಲ್ಲಿ ಊಟದ ವ್ಯವಸ್ಥೆ ಸರಿಯಿಲ್ಲ. ನೀರಿನ ವ್ಯವಸ್ಥೆ ಸರಿಯಿಲ್ಲ.ಸ್ವಚ್ಛತೆ ಕೊರತೆ ಇದೆ. ಅಧಿಕಾರಿಗಳು ಸ್ಪಂದಿಸಿದ ಇದ್ದಲ್ಲಿ ಶಾಸಕರಾದ ನಿಮಗೆ ನಾವು ಕರೆ ಮಾಡುತ್ತೇವೆ ಎಂದು ಹೇಳಿದರು. ಆ ವೇಳೆ ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಮಾತನಾಡಿ, ಕುಡಿಯುವ ನೀರು ಸ್ವಚ್ಛತೆ ಕಾಪಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಬಸವನಗೌಡ ತುರುವಿಹಾಳ ಮಾತನಾಡಿ ಕೊರೊನಾ ಸೋಂಕು ಕಳೆದ ಹಲವು ದಿನಗಳಿಂದ ಹೆಚ್ಚಾಗಿ ಪರಿಣಮಿಸಿದೆ. ಸೋಂಕಿತರು ಭಯಪಡಬೇಡಿ ಎಂದು  ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ್, ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್,ಶ್ರೀಶೈಲಪ್ಪ ಬ್ಯಾಳಿ, ಪುರಸಭೆ ಮುಖ್ಯ ಅಧಿಕಾರಿ ಹನುಮಂತಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು