5:22 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು

28/05/2021, 08:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. 

ಸೋಂಕಿತರಿಗೆ ಧೈರ್ಯ ತುಂಬಿದ ಅವರು ಗ್ರಾಮೀಣ ಪ್ರದೇಶದಲ್ಲಿ ಜನರು ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡ ಬೇಕು.ಮುಖಕ್ಕೆ ಮಾಸ್ಕ್ ಧರಿಸಿ ಸ್ಯಾನಿಟೈಸರ್ ನಿಂದ ತೊಳೆಯುತ್ತಾ ಜೀವ ಕಾಪಾಡಿಕೊಳ್ಳಬೇಕು ಎಂದರು.

ಕೋವಿಡ್ ಸೋಂಕಿತರು ಯಾವುದೇ ಕಾರಣಕ್ಕೆ ಧೈರ್ಯ ಕಳೆದುಕೊಳ್ಳಬಾರದು. ಭಯಪಡ ಬಾರದು. ಆಗ ಏನೂ ಆಗುವುದಿಲ್ಲ. ಹಾಗೆ ಕೋವಿಡ್ ಮುಕ್ತ ಮಾಡೋಣ ಎಂದು ಹೇಳಿದರು.

ಈ ವೇಳೆ ಸೋಂಕಿತರು, ನಮಗೆ ಇಲ್ಲಿ ಊಟದ ವ್ಯವಸ್ಥೆ ಸರಿಯಿಲ್ಲ. ನೀರಿನ ವ್ಯವಸ್ಥೆ ಸರಿಯಿಲ್ಲ.ಸ್ವಚ್ಛತೆ ಕೊರತೆ ಇದೆ. ಅಧಿಕಾರಿಗಳು ಸ್ಪಂದಿಸಿದ ಇದ್ದಲ್ಲಿ ಶಾಸಕರಾದ ನಿಮಗೆ ನಾವು ಕರೆ ಮಾಡುತ್ತೇವೆ ಎಂದು ಹೇಳಿದರು. ಆ ವೇಳೆ ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಮಾತನಾಡಿ, ಕುಡಿಯುವ ನೀರು ಸ್ವಚ್ಛತೆ ಕಾಪಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಬಸವನಗೌಡ ತುರುವಿಹಾಳ ಮಾತನಾಡಿ ಕೊರೊನಾ ಸೋಂಕು ಕಳೆದ ಹಲವು ದಿನಗಳಿಂದ ಹೆಚ್ಚಾಗಿ ಪರಿಣಮಿಸಿದೆ. ಸೋಂಕಿತರು ಭಯಪಡಬೇಡಿ ಎಂದು  ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ್, ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್,ಶ್ರೀಶೈಲಪ್ಪ ಬ್ಯಾಳಿ, ಪುರಸಭೆ ಮುಖ್ಯ ಅಧಿಕಾರಿ ಹನುಮಂತಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು