6:04 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು

28/05/2021, 08:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. 

ಸೋಂಕಿತರಿಗೆ ಧೈರ್ಯ ತುಂಬಿದ ಅವರು ಗ್ರಾಮೀಣ ಪ್ರದೇಶದಲ್ಲಿ ಜನರು ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡ ಬೇಕು.ಮುಖಕ್ಕೆ ಮಾಸ್ಕ್ ಧರಿಸಿ ಸ್ಯಾನಿಟೈಸರ್ ನಿಂದ ತೊಳೆಯುತ್ತಾ ಜೀವ ಕಾಪಾಡಿಕೊಳ್ಳಬೇಕು ಎಂದರು.

ಕೋವಿಡ್ ಸೋಂಕಿತರು ಯಾವುದೇ ಕಾರಣಕ್ಕೆ ಧೈರ್ಯ ಕಳೆದುಕೊಳ್ಳಬಾರದು. ಭಯಪಡ ಬಾರದು. ಆಗ ಏನೂ ಆಗುವುದಿಲ್ಲ. ಹಾಗೆ ಕೋವಿಡ್ ಮುಕ್ತ ಮಾಡೋಣ ಎಂದು ಹೇಳಿದರು.

ಈ ವೇಳೆ ಸೋಂಕಿತರು, ನಮಗೆ ಇಲ್ಲಿ ಊಟದ ವ್ಯವಸ್ಥೆ ಸರಿಯಿಲ್ಲ. ನೀರಿನ ವ್ಯವಸ್ಥೆ ಸರಿಯಿಲ್ಲ.ಸ್ವಚ್ಛತೆ ಕೊರತೆ ಇದೆ. ಅಧಿಕಾರಿಗಳು ಸ್ಪಂದಿಸಿದ ಇದ್ದಲ್ಲಿ ಶಾಸಕರಾದ ನಿಮಗೆ ನಾವು ಕರೆ ಮಾಡುತ್ತೇವೆ ಎಂದು ಹೇಳಿದರು. ಆ ವೇಳೆ ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಮಾತನಾಡಿ, ಕುಡಿಯುವ ನೀರು ಸ್ವಚ್ಛತೆ ಕಾಪಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಬಸವನಗೌಡ ತುರುವಿಹಾಳ ಮಾತನಾಡಿ ಕೊರೊನಾ ಸೋಂಕು ಕಳೆದ ಹಲವು ದಿನಗಳಿಂದ ಹೆಚ್ಚಾಗಿ ಪರಿಣಮಿಸಿದೆ. ಸೋಂಕಿತರು ಭಯಪಡಬೇಡಿ ಎಂದು  ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ್, ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್,ಶ್ರೀಶೈಲಪ್ಪ ಬ್ಯಾಳಿ, ಪುರಸಭೆ ಮುಖ್ಯ ಅಧಿಕಾರಿ ಹನುಮಂತಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು