5:20 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ: ಕೋಲಾರದಲ್ಲಿ ಕೇಂದ್ರ ಸರಕಾರ ವಿರುದ್ಧ ರೈತ ಸಂಘ ಪ್ರತಿಭಟನೆ

28/10/2021, 10:33

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರೈತ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲ್ ಡೀಸಲ್ ಅಡುಗೆ ಅನಿಲವನ್ನು ಬೆಳ್ಳಿ ರಥದಲ್ಲಿ ಗಾಂಧಿ ವನದಿಂದ ಚಂಪಕ್ ಸರ್ಕಲ್‍ವರೆಗೆ ಮೆರವಣಿಗೆ ಮಾಡಿ ಪ್ರತಿಭಟಿಸಲಾಯಿತು.

ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಯವರಿಗೆ ಬೆಲೆ ನಿಯಂತ್ರಣ ಮಾಡಲು ಮನವಿ ನೀಡಿ ಆಗ್ರಹಿಸಲಾಯಿತು.

ರೈತರು ಬೆಳೆದ ಬೆಳೆ ಮಳೆನೀರು ಪಾಲು, ಬಡವರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ನರೇಗ ಜೆ.ಸಿ.ಬಿ ಪಾಲು, ಎಣ್ಣೆಕಾಳು ಅಗತ್ಯ ವಸ್ತುಗಳು ಅಂಬಾನಿ, ಅದಾನಿ ಪಾಲು, ಬಡವರು ಕೂಲಿ ಮಾಡಿದವರು ಕೈಗೆ ಸಿಗದ ಅಗತ್ಯ ವಸ್ತುಗಳಿಂದ ಹಸಿವಿನಿಂದ ನರಳುವ ಮಟ್ಟಕ್ಕೆ ಸರ್ಕಾರ ಶ್ರೀಮಂತಿಕೆಯ ನಡೆಸುತ್ತಿದೆ ಎಂದು ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿ ಗೌಡ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ
ವ್ಯಕ್ತಪಡಿಸಿದರು.

ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ಅವರು ಕಚ್ಚಾ ವಸ್ತುಗಳ ಬೆಲೆ ಏರಿಕೆ ನೆಪದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯ ವಿರುವ ರಸಗೊಬ್ಬರ ಬಿತ್ತನೆ ಬೀಜ ಕೀಟನಾಶಕಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಅಡ ಇಟ್ಟು, ಸಂಬಂಧಪಟ್ಟ ಅಧಿಕಾರಿಗಳನ್ನು ಕಂಪನಿಗಳ ಗುಲಾಮರಾಗಿ ಮಾಡುವ ಜೊತೆಗೆ ಇಡೀ ಕೃಷಿ ಕ್ಷೇತ್ರವನ್ನೇ ಅಂಬಾನಿ ಅದಾನಿಗೆ ಅಡವಿಟ್ಟು ತುತ್ತು ಅನ್ನಕ್ಕಾಗಿ ಹೊರ ದೇಶದ ಬಳಿ ಕೈಚಾಚುವಂತೆ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ ಮಾತನಾಡಿ ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಮದ್ಯರಾತ್ರಿ ಸ್ವಾತಂತ್ರ್ಯ ರಾಜಕಾರಣಿಗಳಿಗೆ ಬಂತು ದೇಶವನ್ನು ಗುಲಾಮಗಿರಿಗೆ ಮತ್ತೆ ತಳ್ಳುವ ಸ್ವಾತಂತ್ರ್ಯ ಎಂಬತಾಗಿದೆ. ಬಿ.ಜೆ.ಪಿ ಸರ್ಕಾರದ ಜನ ವಿರೋದಿ ನೀತಿಯೆಂದು ವಂಗ್ಯವಾಡಿದರು.

ಪ್ರಕೃತಿ ಮುನಿದರೆ ಮಾನವ ಯಾವ ರೀತಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು ಎಂಬುದಕ್ಕೆ ಕಣ್ಣಿಗೆ ಕಾಣದ ವೈರಸ್ ಅಟ್ಟಹಾಸ ಇನ್ನು ಜನ ಸಾಮಾನ್ಯರಿಗೆ ಬುದ್ದಿ ಬಂದಂತಿಲ್ಲ. ಪರಿಸರ ಉಳಿಸಬೇಕಾದ ಸರ್ಕಾರಕ್ಕೆ ಪರಿಜ್ಞಾನ ವಿಲ್ಲದೆ, ಮತ್ತೆ ಅರಣ್ಯ ಮರಗಳನ್ನು ನಾಶ ಮಾಡುವುದಕ್ಕೆ ಅಡಿಗೆ ಅನಿಲದ ಬೆಲೆ ಸಂಚುರಿ ಬಾರಿಸುವ ಮಟ್ಟಕ್ಕೆ ಏರಿಕೆ ಮಾಡುವ ಮುಖಾಂತರ ಮತ್ತೆ ಪುರಾತನ ಕಾಲದ ಸೌದೆ ವಲೆಯನ್ನೇ ಅವಲಂಬಿಸಬೇಕಾದ ಪರಿಸ್ತಿತಿ ಸರ್ಕಾರ ಒದಗಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ ಅಗತ್ಯ ವಸ್ತುಗಳ ನಿಯತ್ರಣಕ್ಕೆ ಕಾನೂನು ಜಾರಿ ಮಾಡಲು ಯೋಗ್ಯತೆ ಇಲ್ಲದ ಸರ್ಕಾರ ತೈಲಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಪೆಟ್ರೋಲ್ ಡೀಸಲ್‍ನ್ನು ಜಿ.ಎಸ್.ಟಿ ವ್ಯಾಪ್ತಿಗೆ ತಂದರೆ ಜನರಿಗೆ ಹೊರೆ ಯಾಗುತ್ತಿರುವ ಬೆಲೆ ಏರಿಕೆಯಿಂದ ರಕ್ಷಣೆ ಮಾಡಬಹುದೆಂದು ಸಲಹೆ ನೀಡಿದರು.

ಒಂದುವಾರದೊಳಗೆ ನಿರಂತರವಾಗಿ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಹಾಗೂ ಪೆಟ್ರೋಲ್ ಡೀಸಲ್ ಅಡಿಗೆ ಅನಿಲಕ್ಕೆ ಕಡಿವಾಣ ಹಾಕದೇ ಇದ್ದರೆ, ಮುಂದಿನ ಜಿಲ್ಲಾ ಪಂಚಾಯತ್ , ತಾಲೂಕು  ಪಂಚಾಯತ್ ಎಂ.ಎಲ್.ಎಲ್ ಚುನಾವಣೆಗಳಲ್ಲಿ ಮತ ಕೇಳಲು ಬರುವ ಬಿ.ಜೆ.ಪಿ ಪ್ರತಿನಿಧಿಗಳನ್ನು ಕಂಬಗಳಿಗೆ ಕಟ್ಟು ಹಾಕುವ ಚಳುವಳಿ ಮಾಡುವ ಎಚ್ಚರಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೀಡುವ ಮುಖಾಂತರ ಮನವಿ ನೀಡಿ, ಆಗ್ರಹಿಸಿದರು.

ಹೋರಾಟದ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ ವಿಲಿಯಂ ಅವರು ನಿಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಕಳುಹಿಸುವ ಭರಸವೆಯನ್ನು ನೀಡಿದರು.

ಹೋರಾಟದಲ್ಲಿ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ಮಾಲೂರು ತಾ.ಅದ್ಯಕ್ಷ ಮಾಸ್ತಿ ವೆಂಕಟೇಶ್, ಯಲ್ಲಣ್ಣ, ಹರೀಶ್, ಆಂಜಿನಪ್ಪ, ತೆರ್ನಹಳ್ಳಿ ಆಂಜಿನಪ್ಪ, ತೆರ್ನಹಳ್ಳೀ ವೆಂಕಿ, ಮಂಗಸಂದ್ರ ನಾಗೇಶ್, ಕಿರಣ್, ಚಲಪತಿ, ಚಾಂದ್‍ಪಾಷ, ಚಂದ್ರಪ್ಪ, ಕೆಂಪರೆಡ್ಡಿ, ಬಾಬಾಜನ್, ವೇಣು, ನವೀನ್, ಕೇಶವ, ಮೂರಾಂಡಹಳ್ಳಿ ಶಿವಾರೆಡ್ಡಿ, ರಾಮಕೃಷ್ಣಪ್ಪ, ನಾಗಯ್ಯ, ಭೀಮಗಾನಹಳ್ಳಿ ಮುನಿರಾಜು, ರಾಮಸಮದ್ರ ವೇಣುಗೋಪಾಲ್, ಸಂದೀಪ್, ಮನೋಹರ್, ಚೌಡಮ್ಮ, ನಾಗರತ್ನಮ್ಮ, ರಾಧ, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು