7:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣದ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕಾರ: ಬೊಂದೇಲ್ ನಿವಾಸಿಯ ಬಂಧನ; ತೀವ್ರ ವಿಚಾರಣೆ

28/10/2021, 16:19

ಮಂಗಳೂರು(reporterkarnataka.com)ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48ರ ಹರೆಯದ ಅನಂತ್ ಭಟ್ ಅವರು
ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ರಾಜೇಶ್ ಭಟ್’ಗೆ ಸೇರಿದ ಕಾರು, ಫೋನ್ ಸಹ ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.ಅನಂತ್ ಭಟ್ ಅವರನ್ನು ಇದೀಗ ಪೊಲೀಸರು  ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.

ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈವರೆಗೂ ವಕೀಲ ರಾಜೇಶ್ ಭಟ್ ಪತ್ತೆಯಾಗಿಲ್ಲ. 

ಸದ್ಯ ರಾಜೇಶ್ ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೇಶ್ ಅವರನ್ನು ಬೇರೆ ಸ್ಥಳದಲ್ಲಿ ಬಿಟ್ಟು ಬಂದಿರುವುದಾಗಿ ಅನಂತ್ ಮಾಹಿತಿ ನೀಡಿದ್ದು ಅಲ್ಲಿ ಬೇರೆ ಕಾರು, ಮೊಬೈಲ್, ಸಿಮ್ ಬಳಸುತ್ತಿರುವ ಬಗ್ಗೆ ಅನಂತ್ ವಿಚಾರಣೆ ವೇಳೆ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು