3:14 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣದ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕಾರ: ಬೊಂದೇಲ್ ನಿವಾಸಿಯ ಬಂಧನ; ತೀವ್ರ ವಿಚಾರಣೆ

28/10/2021, 16:19

ಮಂಗಳೂರು(reporterkarnataka.com)ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48ರ ಹರೆಯದ ಅನಂತ್ ಭಟ್ ಅವರು
ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ರಾಜೇಶ್ ಭಟ್’ಗೆ ಸೇರಿದ ಕಾರು, ಫೋನ್ ಸಹ ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.ಅನಂತ್ ಭಟ್ ಅವರನ್ನು ಇದೀಗ ಪೊಲೀಸರು  ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.

ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈವರೆಗೂ ವಕೀಲ ರಾಜೇಶ್ ಭಟ್ ಪತ್ತೆಯಾಗಿಲ್ಲ. 

ಸದ್ಯ ರಾಜೇಶ್ ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೇಶ್ ಅವರನ್ನು ಬೇರೆ ಸ್ಥಳದಲ್ಲಿ ಬಿಟ್ಟು ಬಂದಿರುವುದಾಗಿ ಅನಂತ್ ಮಾಹಿತಿ ನೀಡಿದ್ದು ಅಲ್ಲಿ ಬೇರೆ ಕಾರು, ಮೊಬೈಲ್, ಸಿಮ್ ಬಳಸುತ್ತಿರುವ ಬಗ್ಗೆ ಅನಂತ್ ವಿಚಾರಣೆ ವೇಳೆ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು