10:41 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆದಾಯಕ್ಕಿಂತ ಹೆಚ್ಚಿನ ಸಂಪಾದನೆ: ಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ, 35 ಲಕ್ಷ ದಂಡ

28/10/2021, 23:32

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಇಂತಹದ್ದೇ ಪ್ರಕರಣದಲ್ಲಿ ಪಾಲಿಕೆಯ ಅಸಿಸ್ಟೆಂಟ್ ಟೌನ್ ಪ್ಲಾನಿಂಗ್ ಆಫೀಸರ್ ಶಿವರಾಜ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೀಗ ಆದಾಯಕ್ಕಿಂತ ಹೆಚ್ಚು ಸಂಪಾದನೆ ಆರೋಪದ ಮೇಲೆ ಮಂಜುನಾಥ ಸ್ವಾಮಿಗೆ ಸಜೆ ನೀಡಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಸಂಪಾನೆಯ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಲೋಕಾ ಯುಕ್ತ ಪೊಲೀಸರು 2007ರಲ್ಲಿ ಮಂಜುನಾಥ ಸ್ವಾಮಿ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿದ್ದರು. ಇದೀಗ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪುನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ. ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು