8:54 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಆದಾಯಕ್ಕಿಂತ ಹೆಚ್ಚಿನ ಸಂಪಾದನೆ: ಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ, 35 ಲಕ್ಷ ದಂಡ

28/10/2021, 23:32

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಇಂತಹದ್ದೇ ಪ್ರಕರಣದಲ್ಲಿ ಪಾಲಿಕೆಯ ಅಸಿಸ್ಟೆಂಟ್ ಟೌನ್ ಪ್ಲಾನಿಂಗ್ ಆಫೀಸರ್ ಶಿವರಾಜ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೀಗ ಆದಾಯಕ್ಕಿಂತ ಹೆಚ್ಚು ಸಂಪಾದನೆ ಆರೋಪದ ಮೇಲೆ ಮಂಜುನಾಥ ಸ್ವಾಮಿಗೆ ಸಜೆ ನೀಡಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಸಂಪಾನೆಯ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಲೋಕಾ ಯುಕ್ತ ಪೊಲೀಸರು 2007ರಲ್ಲಿ ಮಂಜುನಾಥ ಸ್ವಾಮಿ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿದ್ದರು. ಇದೀಗ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪುನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ. ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು