4:02 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಪರ್ಯಾಯ ಪಂಪ್ ಕೊಳವೆ ಜೋಡಿಸಲು 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ: ಸಾರ್ವಜನಿಕರು ಸಹಕರಿಸಲು ಶಾಸಕರ ಮನವಿ

29/10/2021, 09:16

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಂಬೆ ರೇಚಕ ಸ್ಥಾವರವನ್ನು ಉನ್ನತೀಕರಣ ಯೋಜನೆ ಕಾರ್ಯಗತ ನಿಟ್ಟಿನಲ್ಲಿ ಸರಿಸುಮಾರು 30-40 ದಿನಗಳ‌ ಕಾಲಾವಕಾಶದ‌ ಅವಶ್ಯಕತೆಯಿದೆ. ಆ ಸಂದರ್ಭದಲ್ಲಿ ಮಂಗಳೂರು ನಗರಕ್ಕೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದರಿಂದ, ಆ ಅಡಚಣೆಯನ್ನು ತಪ್ಪಿಸುವ ಸಲುವಾಗಿ ಈಗಿರುವಂತಹ ಹೆಚ್ಚುವರಿ ಸ್ಟಾಂಡ್ ಬೈ ಪಂಪ್ ಗಳನ್ನು ಉಪಯೋಸುವ ನಿಟ್ಟಿನಲ್ಲಿ ಅದಕ್ಕೆ ಬೇಕಿರುವ ಕೊಳವೆ ಜೋಡಣೆಯ ಮಾಡಲು ಎರಡು ದಿನಗಳ‌ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 50 ವರ್ಷ ಹಳೆಯ ಜ್ಯಾಕ್ ವೆಲನ್ನು ಉನ್ನತೀಕರಣಗೊಳಿಸುವ ಕಾಮಗಾರಿಗಳ ಪ್ರಾರಂಭವಾದಾಗ 30-40 ದಿನಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಅಡೆತಡೆಯಾಗದಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದೇವೆ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು