3:56 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು