8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು