7:38 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು