8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್‌ನೆಸ್ ಕಾಳಜಿಯೇ ಜೀವಕ್ಕೆ ಮುಳುವಾಯಿತೆ ?

29/10/2021, 14:26

Reporterkarnataka.com

‘ಅಪ್ಪು’ ಖ್ಯಾತಿಯ ಪವರ್ ಸ್ಟಾರ್
ಪುನೀತ್​ ರಾಜ್​ಕುಮಾರ್ ಇನ್ನು ನೆನಪು ಮಾತ್ರ.

ಕನ್ನಡದ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿತ್ತು.

ತಕ್ಷಣ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಹೃದಯಾಘಾತವಾಗಿರುವುದು ಅಭಿಮಾನಿಗಳನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು