3:14 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು