11:41 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು