1:08 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಅಸ್ತಿ ನೋಂದಣಿಯಲ್ಲಿ ಭಾರಿ ಭ್ರಷ್ಟಾಚಾರ: ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ

30/10/2021, 11:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಬ್ ರಿಜಿಸ್ಟರ್ ಆಫೀಸ್ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿ ಕಡತಗಳ ಶೋಧಕಾರ್ಯ ಆರಂಭಿಸಿದ್ದಾರೆ.

ಆಸ್ತಿ ನೋಂದಣಿಗಾಗಿ ಸಾರ್ವಜನಿಕರಿಂದ ಕಾನೂನು ಬಾಹಿರವಾಗಿ ಸಿಕ್ಕಾಪಟ್ಟೆ ಹಣ ಕೀಳುತ್ತಿರುವ ಬಗ್ಗೆ ದೂರುಗಳು ಹೆಚ್ಚಾಗಿ ಬಂದಿರುವ ಹಿನ್ನೆಲೆಯಲ್ಲಿ, ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿ ಸೇರಿದಂತೆ ಪಟ್ಟಣದಲ್ಲಿನ 11 ಕ್ಕೂ ಹೆಚ್ಚು ಬಾಂಡ್ ರೈಟರ್ ಗಳ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗೃಹ ದಳ (ಎಸಿಬಿ) ದ ವತಿಯಿಂದ ದಾಳಿ ನಡೆಸಿದೆ.

ಎಸಿಬಿ (ಉತ್ತರ ವಲಯ) ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನ ಹಾಗೂ ಡಿವೈಎಸ್ಪಿಗಳಾದ ಕರುಣಾಕರ ಶೆಟ್ಟಿ ಮತ್ತು ಮಂಜುನಾಥ ಗಂಗಲ ಅವರ ನೇತೃತ್ವದಲ್ಲಿ 6 ಮಂದಿ ಇನ್ಸಪೆಕ್ಟರ್ ಗಳು ಮತ್ತು 30 ಕ್ಕೂ ಅಧಿಕ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟರ್ ಕಚೇರಿ ಮೇಲೆ ನಡೆದಿರುವ ಅತಿದೊಡ್ಡ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ.


ಇನ್ಸಪೆಕ್ಟರ್ ಗಳಾದ ಸುನಿಲಕುಮಾರ, ಅಡಿವೇಶ ಗುದಿಗೊಪ್ಪ, ವೀರಣ್ಣ ಹಳ್ಳಿ, ವಿಜಯ ಮಠಪತಿ, ಸಮೀರ್ ಮುಲ್ಲಾ ಮತ್ತು ಪರಮೇಶ್ವರ ಕವಟಗಿ ಹಾಗೂ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು