7:29 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ…

ಇತ್ತೀಚಿನ ಸುದ್ದಿ

ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ

28/05/2021, 14:51

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಅವರು ಆಗ್ರಹಿಸಿದ್ದಾರೆ. 

ಅವರಿಂದು ಮಾಧ್ಯಮದೊಂದಿಗೆ ಮಾತನಾಡುತ್ತ ರಾಜ್ಯದ ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಗ್ರಾಮದಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆಯಾಗಿ ಗ್ರಾಹಕರಿಗೆ ಈಗಾಗಲೇ ನೀಡಿದ್ದು, ಗ್ರಾಮದ ಜನತೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಗಮನಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಇಲಾಖೆ ಈ ರೀತಿ ಪೂರೈಸಿರುವುದು ಹಾಗೂ ಖರೀದಿ ಮಾಡಿರುವುದು ಎಲ್ಲಿಂದ ಹಾಗೂ ಯಾವ ಸಹಕಾರ ಸಂಘ ಖರೀದಿ ಮಾಡಿದ್ದು  ಎಂಬ ಬಗ್ಗೆ ತನಿಖೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಆಹಾರ ಇಲಾಖೆ ಸಂಬಂಧಪಟ್ಟ ಮಂತ್ರಿ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ವಿವಿಧಡೆ ಕಲಬೆರಕೆಯ ಇಂತಹ ಪ್ರಕರಣದ ದೂರುಗಳು ಬಂದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು