11:23 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆ; ಬಸುರಿ ಪತ್ನಿಯ ಆಕ್ರಂದನ

30/10/2021, 22:25

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.com

ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದು ಚಿಕ್ಕಮಗಳೂರು ಜಿಲ್ಲೆಯ ಶ್ರೀನಿವಾಸ ನಗರದ ರಾಮಪುರದ

ಅಭಿಮಾನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಮಧ್ಯಾಹ್ನ 2.30ರಿಂದ 3.45 ಗಂಟೆ ಅವಧಿಯಲ್ಲಿ ಈ ಘಟನೆ ನಡೆದಿದೆ.

ಶರತ್ ಕುಮಾರ್( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾದ ಶರತ್ ಕುಮಾರ್ ಅವರು ಪುನೀತ್ ರಾಜಕುಮಾರ್ ಅವರ ಅಭಿಮಾನಿಯಾಗಿದ್ದು ನಿನ್ನೆಯಿಂದ ಟಿವಿ ನೋಡಿ ತುಂಬಾ ಬೇಸರದಲ್ಲಿದ್ದರು. ಈ ದಿನ ಮನೆಯ ರೂಮಿನ ಕೋಣೆಯಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿವಾಹಿತರಾದ ಅವರಿಗೆ ಹೆಂಡತಿ, ಒಂದೂವರೆ ವರ್ಷದ ಹೆಣ್ಣು ಮಗುವಿದ್ದು, ಈತನ ಪತ್ನಿ ಪುನಃ ಗರ್ಭಿಣಿ ಆಗಿರುತ್ತಾರೆ. ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇವರ ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದು ನಾಳೆ ಬಂದ ನಂತರ ಅಂತ್ಯಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು