1:52 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆ; ಬಸುರಿ ಪತ್ನಿಯ ಆಕ್ರಂದನ

30/10/2021, 22:25

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.com

ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದು ಚಿಕ್ಕಮಗಳೂರು ಜಿಲ್ಲೆಯ ಶ್ರೀನಿವಾಸ ನಗರದ ರಾಮಪುರದ

ಅಭಿಮಾನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಮಧ್ಯಾಹ್ನ 2.30ರಿಂದ 3.45 ಗಂಟೆ ಅವಧಿಯಲ್ಲಿ ಈ ಘಟನೆ ನಡೆದಿದೆ.

ಶರತ್ ಕುಮಾರ್( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾದ ಶರತ್ ಕುಮಾರ್ ಅವರು ಪುನೀತ್ ರಾಜಕುಮಾರ್ ಅವರ ಅಭಿಮಾನಿಯಾಗಿದ್ದು ನಿನ್ನೆಯಿಂದ ಟಿವಿ ನೋಡಿ ತುಂಬಾ ಬೇಸರದಲ್ಲಿದ್ದರು. ಈ ದಿನ ಮನೆಯ ರೂಮಿನ ಕೋಣೆಯಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿವಾಹಿತರಾದ ಅವರಿಗೆ ಹೆಂಡತಿ, ಒಂದೂವರೆ ವರ್ಷದ ಹೆಣ್ಣು ಮಗುವಿದ್ದು, ಈತನ ಪತ್ನಿ ಪುನಃ ಗರ್ಭಿಣಿ ಆಗಿರುತ್ತಾರೆ. ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇವರ ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದು ನಾಳೆ ಬಂದ ನಂತರ ಅಂತ್ಯಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು