11:39 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆ; ಬಸುರಿ ಪತ್ನಿಯ ಆಕ್ರಂದನ

30/10/2021, 22:25

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.com

ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದು ಚಿಕ್ಕಮಗಳೂರು ಜಿಲ್ಲೆಯ ಶ್ರೀನಿವಾಸ ನಗರದ ರಾಮಪುರದ

ಅಭಿಮಾನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಮಧ್ಯಾಹ್ನ 2.30ರಿಂದ 3.45 ಗಂಟೆ ಅವಧಿಯಲ್ಲಿ ಈ ಘಟನೆ ನಡೆದಿದೆ.

ಶರತ್ ಕುಮಾರ್( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾದ ಶರತ್ ಕುಮಾರ್ ಅವರು ಪುನೀತ್ ರಾಜಕುಮಾರ್ ಅವರ ಅಭಿಮಾನಿಯಾಗಿದ್ದು ನಿನ್ನೆಯಿಂದ ಟಿವಿ ನೋಡಿ ತುಂಬಾ ಬೇಸರದಲ್ಲಿದ್ದರು. ಈ ದಿನ ಮನೆಯ ರೂಮಿನ ಕೋಣೆಯಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿವಾಹಿತರಾದ ಅವರಿಗೆ ಹೆಂಡತಿ, ಒಂದೂವರೆ ವರ್ಷದ ಹೆಣ್ಣು ಮಗುವಿದ್ದು, ಈತನ ಪತ್ನಿ ಪುನಃ ಗರ್ಭಿಣಿ ಆಗಿರುತ್ತಾರೆ. ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇವರ ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದು ನಾಳೆ ಬಂದ ನಂತರ ಅಂತ್ಯಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು