8:02 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು