10:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು