9:52 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು