9:52 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು