11:30 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು