8:46 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾ ಕಾಂಗ್ರೆಸ್‌ನಿಂದ  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಶ್ರದ್ಧಾಂಜಲಿ

31/10/2021, 18:45

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ , ತಮ್ಮ ನಟನೆ , ಸಜ್ಜನಿಕೆ , ಹೃದಯವಂತಿಕೆಯ ಮೂಲಕ ಕರ್ನಾಟಕದ ಜನರ ಹೃದಯ ಗೆದ್ದಿದ್ದ ಪವರ್ ಸ್ಟಾರ್ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು.

ಕನ್ನಡ ನಾಡು – ನುಡಿಗೆ ರಾಜ್‌ಕುಮಾರ್‌ ಅವರ ಕುಟುಂಬ ನೀಡಿರುವ ಕೊಡುಗೆ ಅಪಾರ. ಅದರಲ್ಲೂ ಪುನೀತ್ ರಾಜ್‌ಕುಮಾರ್‌ ಅವರ ಸಮಾಜಮುಖಿ ಕಾರ್ಯಗಳು ಅವರ ಹಿರಿಮೆಯನ್ನು ಮತ್ತಷ್ಟು  ಹೆಚ್ಚಿಸಿದೆ, ಕನ್ನಡ ನಾಡು ಇಂದು ಓರ್ವ ಧೀಮಂತ ನಟನನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದರು . ಈ ಸಂದರ್ಭದಲ್ಲಿ ಮುಖಂಡರಾದ ಇಟ್ಬಾಲ್ ಅಹಮದ್‌ , ಊರುಬಾಗಿಲು ಶ್ರೀನಿವಾಸ್ , ಕೆಪಿಸಿಸಿ ಸದಸ್ಯ ಕುಮಾರ್‌ , ಮುಖಂಡರಾದ ಪ್ರಸಾದ್‌ಬಾಬು , ಗಂಗಮ್ಮನಪಾಳ್ಯ ರಾಮಯ್ಯ ಲಾಲ್‌ಬಹುದ್ದೂರು ಶಾಸ್ತ್ರಿ , ವೆಂಕಟಪತಿ , ಬಾಬು ಸೇರಿದಂತೆ ಹಲವಾರು ಮಂದಿ ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು