11:15 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾ ಕಾಂಗ್ರೆಸ್‌ನಿಂದ  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಶ್ರದ್ಧಾಂಜಲಿ

31/10/2021, 18:45

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ , ತಮ್ಮ ನಟನೆ , ಸಜ್ಜನಿಕೆ , ಹೃದಯವಂತಿಕೆಯ ಮೂಲಕ ಕರ್ನಾಟಕದ ಜನರ ಹೃದಯ ಗೆದ್ದಿದ್ದ ಪವರ್ ಸ್ಟಾರ್ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು.

ಕನ್ನಡ ನಾಡು – ನುಡಿಗೆ ರಾಜ್‌ಕುಮಾರ್‌ ಅವರ ಕುಟುಂಬ ನೀಡಿರುವ ಕೊಡುಗೆ ಅಪಾರ. ಅದರಲ್ಲೂ ಪುನೀತ್ ರಾಜ್‌ಕುಮಾರ್‌ ಅವರ ಸಮಾಜಮುಖಿ ಕಾರ್ಯಗಳು ಅವರ ಹಿರಿಮೆಯನ್ನು ಮತ್ತಷ್ಟು  ಹೆಚ್ಚಿಸಿದೆ, ಕನ್ನಡ ನಾಡು ಇಂದು ಓರ್ವ ಧೀಮಂತ ನಟನನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದರು . ಈ ಸಂದರ್ಭದಲ್ಲಿ ಮುಖಂಡರಾದ ಇಟ್ಬಾಲ್ ಅಹಮದ್‌ , ಊರುಬಾಗಿಲು ಶ್ರೀನಿವಾಸ್ , ಕೆಪಿಸಿಸಿ ಸದಸ್ಯ ಕುಮಾರ್‌ , ಮುಖಂಡರಾದ ಪ್ರಸಾದ್‌ಬಾಬು , ಗಂಗಮ್ಮನಪಾಳ್ಯ ರಾಮಯ್ಯ ಲಾಲ್‌ಬಹುದ್ದೂರು ಶಾಸ್ತ್ರಿ , ವೆಂಕಟಪತಿ , ಬಾಬು ಸೇರಿದಂತೆ ಹಲವಾರು ಮಂದಿ ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು