9:18 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾ ಕಾಂಗ್ರೆಸ್‌ನಿಂದ  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಶ್ರದ್ಧಾಂಜಲಿ

31/10/2021, 18:45

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ , ತಮ್ಮ ನಟನೆ , ಸಜ್ಜನಿಕೆ , ಹೃದಯವಂತಿಕೆಯ ಮೂಲಕ ಕರ್ನಾಟಕದ ಜನರ ಹೃದಯ ಗೆದ್ದಿದ್ದ ಪವರ್ ಸ್ಟಾರ್ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು.

ಕನ್ನಡ ನಾಡು – ನುಡಿಗೆ ರಾಜ್‌ಕುಮಾರ್‌ ಅವರ ಕುಟುಂಬ ನೀಡಿರುವ ಕೊಡುಗೆ ಅಪಾರ. ಅದರಲ್ಲೂ ಪುನೀತ್ ರಾಜ್‌ಕುಮಾರ್‌ ಅವರ ಸಮಾಜಮುಖಿ ಕಾರ್ಯಗಳು ಅವರ ಹಿರಿಮೆಯನ್ನು ಮತ್ತಷ್ಟು  ಹೆಚ್ಚಿಸಿದೆ, ಕನ್ನಡ ನಾಡು ಇಂದು ಓರ್ವ ಧೀಮಂತ ನಟನನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದರು . ಈ ಸಂದರ್ಭದಲ್ಲಿ ಮುಖಂಡರಾದ ಇಟ್ಬಾಲ್ ಅಹಮದ್‌ , ಊರುಬಾಗಿಲು ಶ್ರೀನಿವಾಸ್ , ಕೆಪಿಸಿಸಿ ಸದಸ್ಯ ಕುಮಾರ್‌ , ಮುಖಂಡರಾದ ಪ್ರಸಾದ್‌ಬಾಬು , ಗಂಗಮ್ಮನಪಾಳ್ಯ ರಾಮಯ್ಯ ಲಾಲ್‌ಬಹುದ್ದೂರು ಶಾಸ್ತ್ರಿ , ವೆಂಕಟಪತಿ , ಬಾಬು ಸೇರಿದಂತೆ ಹಲವಾರು ಮಂದಿ ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು