10:40 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು