9:40 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು