11:29 AM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಅಡ್ಡಗಲ್ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಅಕ್ಕರೆಯ ಆರೈಕೆ: ಇಲ್ಲಿನ  ವೈದ್ಯಾಧಿಕಾರಿ ಅಂದ್ರೆ ಗ್ರಾಮಸ್ಥರಿಗೆ ಬಲು ಇಷ್ಟ!

28/05/2021, 15:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಗ್ರಾಮೀಣ ಪ್ರದೇಶದ ಜನರು ಆಸ್ಪತ್ರೆ ಎಂದರೆ ಮಾರು ದೂರ ಅರಿಯುತ್ತಾರೆ. ಇದು ಆಪರೇಶನ್ ಮಾಡುವ, ಇಂಜೆಕ್ಷನ್ ಕೊಡುವ ಸ್ಥಳ ಎಂದು ಭಯಪಟ್ಟು ಕೊಳ್ಳುತ್ತಾರೆ. ಇಂತಹ ಸನ್ನಿವೇಶದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಮಂದಿ ಬಂದು ಆರೋಗ್ಯ ಸೇವೆ ಪಡೆಯುತ್ತಾರೆ. ಇದಕ್ಕೆಲ್ಲ ಕಾರಣ ಇಲ್ಲಿನ ವೈದ್ಯಾಧಿಕಾರಿಗೆ ರೋಗಿಗಳ ಮೇಲಿನ ಪ್ರೀತಿ ಮತ್ತು ಕಾಳಜಿ.ಜೀವನವೆಂದ ಮೇಲೆ ಸುಖ, ಕಷ್ಟ , ಸ್ವಾಸ್ಥ , ರೋಗರುಜಿನಗಳು ಇದ್ದೇ ಇರುತ್ತವೆ . ರೋಗಗಳು ಬಾಧಿಸಲು ಆರಂಭಿಸಿದಾಗ ಔಷಧವನ್ನು ಪರಮ ಶತ್ರುವಿನಂತೆ ಕಾಣುವ ಅದೆಷ್ಟೋ ಜನರಿರುತ್ತಾರೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಕೆಲವರು ಆಸ್ಪತ್ರೆಯನ್ನು ಸಹ ಪರವ ಶತ್ರುವಿನಂತೆ ಕಾಣುವಂತವರು ಇದ್ದಾರೆ. ಗ್ರಾಮೀಣ ಭಾಗದ ನಾಗರಿಕರಲ್ಲಿ ಆಸ್ಪತ್ರೆ ಎಂದರೆ ಇಂಜಕ್ಷನ್ ಕೊಡುವಂತಹ , ಆಪರೇಷನ್ ಮಾಡುವಂತಹ ಸ್ಥಳ ಎಂಬ ಭಯದ ವಾತವರಣ ಹಾಗೂ ಆಸ್ಪತ್ರೆಗೆ ಹೋದರೆ ಇಲ್ಲಸಲ್ಲದ ಪರೀಕ್ಷೆ ಗಳನ್ನು ಮಾಡಿ ಮಾನಸಿಕವಾಗಿ ಹಿಂಸೆಯಾಗುತ್ತದೆ ಹಾಗೂ ಜೇಬು ಖಾಲಿಯಾಗುತ್ತದೆ ಎನ್ನುವಂತಹ ಮನೋಭಾವವಿದೆ. ಇನ್ನು ಕೆಲವರು ಆಕಸ್ಮಿಕವಾಗಿ ಖಾಯಿಲೆ ಬಂದರೆ ಹಳ್ಳಿಗಳಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲದೆ , ನಗರ ಪ್ರದೇಶಕ್ಕೆ ಹೋಗಲು ಸಾಧ್ಯವಾಗದೆ ಕಾಯಿಲೆಯಿಂದ ಬಳಲುವ ಜನರಿದ್ದಾರೆ.

ಇಂತಹ ಸಮಯದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಜನ ಬಂದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಜೊತೆಗೆ ಮನಸ್ಸಿಗೆ ನೆಮ್ಮದಿ ನೀಡುವಂತಹ ಅತ್ಯುತ್ತಮ ಪರಿಸರವು ಆವರಣದಲ್ಲಿ ಸೃಷ್ಟಿಯಾಗಿದೆ.ಉತ್ತಮ ವಾತವರಣವು ಸೃಷ್ಟಿಯಾಗಲು ಸ್ಥಳೀಯ ಆರೋಗ್ಯ ಕೇಂದ್ರ ಸಿಬ್ಬಂದಿಯು ಮನಸವಾಚ ಕಾರ್ಯನಿರ್ವಹಿಸುತ್ತಿದೆ. ಇನ್ನು ವೈದ್ಯರು “ ವೈದ್ಯೋ ನಾರಾಯಣಹರಿಃ ” ಎಂಬಂತೆ ವೈದ್ಯರು ಆರೋಗ್ಯ ಕೇಂದ್ರಕ್ಕೆ ಬರುವ ಅನಾರೋಗ್ಯವಂತರಿಗೆ ಅಕ್ಕರೆಯಿಂದ ಉತ್ತಮ ಚಿಕಿತ್ಸೆಯನ್ನು ನೀಡುತ್ತಾ , ರೋಗಿಯ ಸಮಸ್ಯೆಯನ್ನು ಆಲಿಸಿ, ಪರಿಶೀಲಿಸಿ ಸಮಸ್ಯೆಗೆ ತಕ್ಕಂತೆ ಕಡಿಮೆ ವೆಚ್ಚದ ಪರಿಹಾರದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಈ ಭಾಗದ ನಾಗರೀ ಕರೆಲ್ಲರ ಮನೆಮಾತಾಗಿದ್ದಾರೆ.

ಸಾಮಾನ್ಯವಾಗಿ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತದೆ. ಆದರೆ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾತ್ರ ವೈದ್ಯರು ಸಾದಾ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿರುತ್ತಾರೆ ಎಂಬ ಮಾತು ಈ ಭಾಗದ ನಾಗರೀಕರಲ್ಲಿ ಕೇಳಿ ಬರುತ್ತದೆ.

ಕೊರೊನಾ ರೋಗದ ಬಗ್ಗೆ ಭಯ ಬೇಡ ಎಚ್ಚರದಿಂದ  ಇದ್ದರೆ ಸಾಕು . ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ ಇಲ್ಲಿನ ವೈದ್ಯಾಧಿಕಾರಿ ಡಾ. ಕೆ.ಆರ್‌.ಕವಿತಾ.

ಇತ್ತೀಚಿನ ಸುದ್ದಿ

ಜಾಹೀರಾತು