11:44 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಅಡ್ಡಗಲ್ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಅಕ್ಕರೆಯ ಆರೈಕೆ: ಇಲ್ಲಿನ  ವೈದ್ಯಾಧಿಕಾರಿ ಅಂದ್ರೆ ಗ್ರಾಮಸ್ಥರಿಗೆ ಬಲು ಇಷ್ಟ!

28/05/2021, 15:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಗ್ರಾಮೀಣ ಪ್ರದೇಶದ ಜನರು ಆಸ್ಪತ್ರೆ ಎಂದರೆ ಮಾರು ದೂರ ಅರಿಯುತ್ತಾರೆ. ಇದು ಆಪರೇಶನ್ ಮಾಡುವ, ಇಂಜೆಕ್ಷನ್ ಕೊಡುವ ಸ್ಥಳ ಎಂದು ಭಯಪಟ್ಟು ಕೊಳ್ಳುತ್ತಾರೆ. ಇಂತಹ ಸನ್ನಿವೇಶದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಮಂದಿ ಬಂದು ಆರೋಗ್ಯ ಸೇವೆ ಪಡೆಯುತ್ತಾರೆ. ಇದಕ್ಕೆಲ್ಲ ಕಾರಣ ಇಲ್ಲಿನ ವೈದ್ಯಾಧಿಕಾರಿಗೆ ರೋಗಿಗಳ ಮೇಲಿನ ಪ್ರೀತಿ ಮತ್ತು ಕಾಳಜಿ.ಜೀವನವೆಂದ ಮೇಲೆ ಸುಖ, ಕಷ್ಟ , ಸ್ವಾಸ್ಥ , ರೋಗರುಜಿನಗಳು ಇದ್ದೇ ಇರುತ್ತವೆ . ರೋಗಗಳು ಬಾಧಿಸಲು ಆರಂಭಿಸಿದಾಗ ಔಷಧವನ್ನು ಪರಮ ಶತ್ರುವಿನಂತೆ ಕಾಣುವ ಅದೆಷ್ಟೋ ಜನರಿರುತ್ತಾರೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಕೆಲವರು ಆಸ್ಪತ್ರೆಯನ್ನು ಸಹ ಪರವ ಶತ್ರುವಿನಂತೆ ಕಾಣುವಂತವರು ಇದ್ದಾರೆ. ಗ್ರಾಮೀಣ ಭಾಗದ ನಾಗರಿಕರಲ್ಲಿ ಆಸ್ಪತ್ರೆ ಎಂದರೆ ಇಂಜಕ್ಷನ್ ಕೊಡುವಂತಹ , ಆಪರೇಷನ್ ಮಾಡುವಂತಹ ಸ್ಥಳ ಎಂಬ ಭಯದ ವಾತವರಣ ಹಾಗೂ ಆಸ್ಪತ್ರೆಗೆ ಹೋದರೆ ಇಲ್ಲಸಲ್ಲದ ಪರೀಕ್ಷೆ ಗಳನ್ನು ಮಾಡಿ ಮಾನಸಿಕವಾಗಿ ಹಿಂಸೆಯಾಗುತ್ತದೆ ಹಾಗೂ ಜೇಬು ಖಾಲಿಯಾಗುತ್ತದೆ ಎನ್ನುವಂತಹ ಮನೋಭಾವವಿದೆ. ಇನ್ನು ಕೆಲವರು ಆಕಸ್ಮಿಕವಾಗಿ ಖಾಯಿಲೆ ಬಂದರೆ ಹಳ್ಳಿಗಳಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲದೆ , ನಗರ ಪ್ರದೇಶಕ್ಕೆ ಹೋಗಲು ಸಾಧ್ಯವಾಗದೆ ಕಾಯಿಲೆಯಿಂದ ಬಳಲುವ ಜನರಿದ್ದಾರೆ.

ಇಂತಹ ಸಮಯದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಜನ ಬಂದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಜೊತೆಗೆ ಮನಸ್ಸಿಗೆ ನೆಮ್ಮದಿ ನೀಡುವಂತಹ ಅತ್ಯುತ್ತಮ ಪರಿಸರವು ಆವರಣದಲ್ಲಿ ಸೃಷ್ಟಿಯಾಗಿದೆ.ಉತ್ತಮ ವಾತವರಣವು ಸೃಷ್ಟಿಯಾಗಲು ಸ್ಥಳೀಯ ಆರೋಗ್ಯ ಕೇಂದ್ರ ಸಿಬ್ಬಂದಿಯು ಮನಸವಾಚ ಕಾರ್ಯನಿರ್ವಹಿಸುತ್ತಿದೆ. ಇನ್ನು ವೈದ್ಯರು “ ವೈದ್ಯೋ ನಾರಾಯಣಹರಿಃ ” ಎಂಬಂತೆ ವೈದ್ಯರು ಆರೋಗ್ಯ ಕೇಂದ್ರಕ್ಕೆ ಬರುವ ಅನಾರೋಗ್ಯವಂತರಿಗೆ ಅಕ್ಕರೆಯಿಂದ ಉತ್ತಮ ಚಿಕಿತ್ಸೆಯನ್ನು ನೀಡುತ್ತಾ , ರೋಗಿಯ ಸಮಸ್ಯೆಯನ್ನು ಆಲಿಸಿ, ಪರಿಶೀಲಿಸಿ ಸಮಸ್ಯೆಗೆ ತಕ್ಕಂತೆ ಕಡಿಮೆ ವೆಚ್ಚದ ಪರಿಹಾರದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಈ ಭಾಗದ ನಾಗರೀ ಕರೆಲ್ಲರ ಮನೆಮಾತಾಗಿದ್ದಾರೆ.

ಸಾಮಾನ್ಯವಾಗಿ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತದೆ. ಆದರೆ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾತ್ರ ವೈದ್ಯರು ಸಾದಾ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿರುತ್ತಾರೆ ಎಂಬ ಮಾತು ಈ ಭಾಗದ ನಾಗರೀಕರಲ್ಲಿ ಕೇಳಿ ಬರುತ್ತದೆ.

ಕೊರೊನಾ ರೋಗದ ಬಗ್ಗೆ ಭಯ ಬೇಡ ಎಚ್ಚರದಿಂದ  ಇದ್ದರೆ ಸಾಕು . ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ ಇಲ್ಲಿನ ವೈದ್ಯಾಧಿಕಾರಿ ಡಾ. ಕೆ.ಆರ್‌.ಕವಿತಾ.

ಇತ್ತೀಚಿನ ಸುದ್ದಿ

ಜಾಹೀರಾತು