1:12 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು