6:43 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ

02/11/2021, 11:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು.

ಮುಖಂಡ ಚಂದ್ರ ಭೂಪಲ್ ನಾಡಗೌಡ್ರು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲ ಮಠಾಧೀಶರುಗಳ ಹಾಗೂ ಜಂಗಮ ಸಮಾಜದ ಗುರುಹಿರಿಯರ ನಂತರ ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ, ವಿಧ ವಿಧದ ಭಜನೆ, ಬಾಜಿ, ಡೊಳ್ಳು, ಕಳಸ ಕನ್ನಡಿ ಒಂದಿಗೆ ಪ್ರಮುಖ ಬೀದಿಗಳಲ್ಲಿ ಶರಣರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಚಿಕ್ಕಮಗಳೂರಿನಿಂದ ಕಲಾ ಪುರೋಹಿತರನ್ನು ಕರಿಸಿ ನೋಡುಗರನ್ನು ಆಕರ್ಷಿಸುವಂತೆ ಕಾರ್ಯಕ್ರಮಗಳು ಜರುಗಿದವು. ಶರಣರ ಆಶೀರ್ವಾದದಿಂದ ಕಾರ್ಯಕ್ರಮಕ್ಕೆ ಆಯೋಜಿಸಿದ್ದ ಭಕ್ತರ ಪಾವನ ಎಂಬಂತೆ ಶರಣರ ಮಾರ್ಗದರ್ಶನ ಜೀವನದ ಅವಶ್ಯಕ ಎಂಬುವುದನ್ನು ನಾವು ಹರಿದು ಕೊಳ್ಳಬೇಕೆಂದು ಶರಣರು ಹೇಳಿದರು ಕಾರ್ಯಕ್ರಮದ ಪ್ರಮುಖ ಘಟ್ಟವಾದ ಜಂಗಮ ಸಮಾಜದ ಧರ್ಮೋಪದೇಶ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸತ್ಯಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಶಿವಶರಣರು, ಪುರೋಹಿತರು, ಬಸವರಾಜ್ ಬಾದರ್ಲಿ, ಶಿಕ್ಷಕ ವೈಜನಾಥ್, ಮಲ್ಲಯ್ಯ

ನವಲಿ, ವೀರೇಶ್ ರಾರವಿ, ಶಿವಕುಮಾರ್, ಗೀತಾ ಹಿರೇಮಠ, ಶಿವಲೀಲಾ ಹಿರೇಮಠ ಪುರೋಹಿತರು ಬಸವರಾಜ್ ಗೊರೆಬಾಳ್,ಅಭಿನವ ಗಿಣಿವಾರ, ಶಿವಯೋಗಿ ಮಸ್ಕಿಯ ಗಚ್ಚಿನ ಮಠದ ವರ ರುದ್ರಮುನಿ ಶಿವಾಚಾರ್ಯರು ತುರುವಿಹಾಳ, ಅಮರಗುಂಡ ದೇವರು ಅಭಿನವ ಸೋಮನಾಥ ಶಿವಾಚಾರ್ಯರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು