11:10 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ

02/11/2021, 11:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು.

ಮುಖಂಡ ಚಂದ್ರ ಭೂಪಲ್ ನಾಡಗೌಡ್ರು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲ ಮಠಾಧೀಶರುಗಳ ಹಾಗೂ ಜಂಗಮ ಸಮಾಜದ ಗುರುಹಿರಿಯರ ನಂತರ ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ, ವಿಧ ವಿಧದ ಭಜನೆ, ಬಾಜಿ, ಡೊಳ್ಳು, ಕಳಸ ಕನ್ನಡಿ ಒಂದಿಗೆ ಪ್ರಮುಖ ಬೀದಿಗಳಲ್ಲಿ ಶರಣರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಚಿಕ್ಕಮಗಳೂರಿನಿಂದ ಕಲಾ ಪುರೋಹಿತರನ್ನು ಕರಿಸಿ ನೋಡುಗರನ್ನು ಆಕರ್ಷಿಸುವಂತೆ ಕಾರ್ಯಕ್ರಮಗಳು ಜರುಗಿದವು. ಶರಣರ ಆಶೀರ್ವಾದದಿಂದ ಕಾರ್ಯಕ್ರಮಕ್ಕೆ ಆಯೋಜಿಸಿದ್ದ ಭಕ್ತರ ಪಾವನ ಎಂಬಂತೆ ಶರಣರ ಮಾರ್ಗದರ್ಶನ ಜೀವನದ ಅವಶ್ಯಕ ಎಂಬುವುದನ್ನು ನಾವು ಹರಿದು ಕೊಳ್ಳಬೇಕೆಂದು ಶರಣರು ಹೇಳಿದರು ಕಾರ್ಯಕ್ರಮದ ಪ್ರಮುಖ ಘಟ್ಟವಾದ ಜಂಗಮ ಸಮಾಜದ ಧರ್ಮೋಪದೇಶ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸತ್ಯಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಶಿವಶರಣರು, ಪುರೋಹಿತರು, ಬಸವರಾಜ್ ಬಾದರ್ಲಿ, ಶಿಕ್ಷಕ ವೈಜನಾಥ್, ಮಲ್ಲಯ್ಯ

ನವಲಿ, ವೀರೇಶ್ ರಾರವಿ, ಶಿವಕುಮಾರ್, ಗೀತಾ ಹಿರೇಮಠ, ಶಿವಲೀಲಾ ಹಿರೇಮಠ ಪುರೋಹಿತರು ಬಸವರಾಜ್ ಗೊರೆಬಾಳ್,ಅಭಿನವ ಗಿಣಿವಾರ, ಶಿವಯೋಗಿ ಮಸ್ಕಿಯ ಗಚ್ಚಿನ ಮಠದ ವರ ರುದ್ರಮುನಿ ಶಿವಾಚಾರ್ಯರು ತುರುವಿಹಾಳ, ಅಮರಗುಂಡ ದೇವರು ಅಭಿನವ ಸೋಮನಾಥ ಶಿವಾಚಾರ್ಯರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು