7:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ  66ನೇ ಕನ್ನಡ ರಾಜ್ಯೋತ್ಸವ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

02/11/2021, 11:58

ಮಂಗಳೂರು(reporterkarnataka news): ಬಂಟ್ವಾಳ ತಾಲೂಕಿನ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ ಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ  ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.

ಶಿಕ್ಷಕಿ ಮಾಲಿನಿ ಮಾತನಾಡಿ,ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು.ಶಾಲಾ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಕನ್ನಡ ರಾಜ್ಯೋತ್ಸವ, ಕರ್ನಾಟಕ ಏಕೀಕರಣ ಹೋರಾಟ, ಕನ್ನಡ ನಾಡು-ನುಡಿಯ ಬಗ್ಗೆ ಸವಿವರವಾಗಿ ಅವರು ಮಕ್ಕಳಿಗೆ ತಿಳಿಸಿದರು.

ಕನ್ನಡ ಭಾಷಾ  ಶಿಕ್ಷಕಿ ಜಯಲಕ್ಷ್ಮಿ ಮಾತನಾಡಿ,ಕನ್ನಡ ಭಾಷೆ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುತ್ತಾ ಕನ್ನಡವನ್ನು ಉಳಿಸುವಲ್ಲಿ ಎಲ್ಲರೂ  ಪ್ರಯತ್ನ ಪಡಬೇಕೆಂದು ತಿಳಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಕನ್ನಡ  ಶಿಕ್ಷಕಿ ಜಯಲಕ್ಷ್ಮಿ ಎಲ್ಲಾ ಅತಿಥಿಗಳನ್ನು ಕನ್ನಡ ಶಾಲು ಹೊದಿಸುವ ಮೂಲಕ ಸ್ವಾಗತಿಸಿದರು.

ಶಾಲಾ ಶಿಕ್ಷಕರಾದ ಶ್ರೀಯುತ ಪ್ರಭಾಕರ್, ಸಂತೋಷ್ ಕೆ ಪಮ್ಮರ್ , ವಿನಿತ,ಪುಷ್ಪ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು