6:42 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ  66ನೇ ಕನ್ನಡ ರಾಜ್ಯೋತ್ಸವ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

02/11/2021, 11:58

ಮಂಗಳೂರು(reporterkarnataka news): ಬಂಟ್ವಾಳ ತಾಲೂಕಿನ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ ಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ  ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.

ಶಿಕ್ಷಕಿ ಮಾಲಿನಿ ಮಾತನಾಡಿ,ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು.ಶಾಲಾ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಕನ್ನಡ ರಾಜ್ಯೋತ್ಸವ, ಕರ್ನಾಟಕ ಏಕೀಕರಣ ಹೋರಾಟ, ಕನ್ನಡ ನಾಡು-ನುಡಿಯ ಬಗ್ಗೆ ಸವಿವರವಾಗಿ ಅವರು ಮಕ್ಕಳಿಗೆ ತಿಳಿಸಿದರು.

ಕನ್ನಡ ಭಾಷಾ  ಶಿಕ್ಷಕಿ ಜಯಲಕ್ಷ್ಮಿ ಮಾತನಾಡಿ,ಕನ್ನಡ ಭಾಷೆ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುತ್ತಾ ಕನ್ನಡವನ್ನು ಉಳಿಸುವಲ್ಲಿ ಎಲ್ಲರೂ  ಪ್ರಯತ್ನ ಪಡಬೇಕೆಂದು ತಿಳಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಕನ್ನಡ  ಶಿಕ್ಷಕಿ ಜಯಲಕ್ಷ್ಮಿ ಎಲ್ಲಾ ಅತಿಥಿಗಳನ್ನು ಕನ್ನಡ ಶಾಲು ಹೊದಿಸುವ ಮೂಲಕ ಸ್ವಾಗತಿಸಿದರು.

ಶಾಲಾ ಶಿಕ್ಷಕರಾದ ಶ್ರೀಯುತ ಪ್ರಭಾಕರ್, ಸಂತೋಷ್ ಕೆ ಪಮ್ಮರ್ , ವಿನಿತ,ಪುಷ್ಪ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು