4:58 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ವಾಹನಗಳ ಬ್ಯಾಟರಿ ಕಳವು ಪ್ರಕರಣ: 5 ಮಂದಿ ಆರೋಪಿಗಳ ಬಂಧನ; 2.21 ಲಕ್ಷ ರೂ. ಮೌಲ್ಯದ ಸೊತ್ತು ವಶ

02/11/2021, 12:15

ಕಾಪು(reporterkarnataka.com): ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಬಂಧಿತರನ್ನು ಕಾಪು ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಶರೀಫ್ (35), ಕಳತ್ತೂರು ಚಂದ್ರನಗರ ಜನತಾ ಕಾಲನಿಯ ನಿವಾಸಿ ಅಲ್ತಾಫ್ (26), ಕುಂದಾಪುರ ತೆಕ್ಕಟ್ಟೆಯ ಕಣ್ಣುಕೆರೆ ಗ್ರಾಮದ ಪ್ರಸ್ತುತ ಮೂಳೂರಿನ ಎಸ್‍ಎಸ್ ರೋಡ್ ನಿವಾಸಿ ಫರ್ಜೀನ್ ಅಹಮದ್ (21), ಮೂಳೂರಿನ ಫಿಶರೀಸ್ ರಸ್ತೆಯ ನಿವಾಸಿ ಅಫ್ಝಲ್ ರಹ್ಮಾನ್ (20), ಮೂಳೂರಿನ ಫಿಶರೀಸ್ ರಸ್ತೆಯ ಮುಹಮ್ಮದ್ ಇಜಾಝ್ (18) ಎಂದು ಗುರುತಿಸಲಾಗಿದೆ.

ಬಂಧಿತರಿಂದ 2.21 ಲಕ್ಷ ರೂ. ಮೌಲ್ಯದ 22 ಬ್ಯಾಟರಿ, ಮೂರು ಕಾರು ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಶರೀಫ್ ಶಿರ್ವ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದು, ವಾಹನಗಳ ಬ್ಯಾಟರಿ ಕಳವು ಮಾಡುತಿದ್ದ ಬಗ್ಗೆ ಪಡುಬಿದ್ರಿ, ಶಿರ್ವ ಹಾಗೂ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್‍ಪಿ ಎನ್. ವಿಷ್ಣುವರ್ಧನ್, ಎಎಸ್‍ಪಿ ಕುಮಾರಚಂದ್ರ ನಿರ್ದೆಶನದಂತೆ, ಕಾರ್ಕಳ ಡಿವೈಎಸ್‍ಪಿ ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ ಕಾಪು ಇನ್ಸ್‍ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪಿಎಸ್‍ಐ ತಿಮ್ಮೇಶ್, ರಾಘವೇಂದ್ರ, ತಂಡದ ಪ್ರವೀಣ್ ಕುಮಾರ್, ನಾರಾಯಣ, ರಾಜೇಶ್, ಹೇಮರಾಜ್, ಸಂದೇಶ, ಆನಂದ ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು