1:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ…

ಇತ್ತೀಚಿನ ಸುದ್ದಿ

ವಾಹನಗಳ ಬ್ಯಾಟರಿ ಕಳವು ಪ್ರಕರಣ: 5 ಮಂದಿ ಆರೋಪಿಗಳ ಬಂಧನ; 2.21 ಲಕ್ಷ ರೂ. ಮೌಲ್ಯದ ಸೊತ್ತು ವಶ

02/11/2021, 12:15

ಕಾಪು(reporterkarnataka.com): ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಬಂಧಿತರನ್ನು ಕಾಪು ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಶರೀಫ್ (35), ಕಳತ್ತೂರು ಚಂದ್ರನಗರ ಜನತಾ ಕಾಲನಿಯ ನಿವಾಸಿ ಅಲ್ತಾಫ್ (26), ಕುಂದಾಪುರ ತೆಕ್ಕಟ್ಟೆಯ ಕಣ್ಣುಕೆರೆ ಗ್ರಾಮದ ಪ್ರಸ್ತುತ ಮೂಳೂರಿನ ಎಸ್‍ಎಸ್ ರೋಡ್ ನಿವಾಸಿ ಫರ್ಜೀನ್ ಅಹಮದ್ (21), ಮೂಳೂರಿನ ಫಿಶರೀಸ್ ರಸ್ತೆಯ ನಿವಾಸಿ ಅಫ್ಝಲ್ ರಹ್ಮಾನ್ (20), ಮೂಳೂರಿನ ಫಿಶರೀಸ್ ರಸ್ತೆಯ ಮುಹಮ್ಮದ್ ಇಜಾಝ್ (18) ಎಂದು ಗುರುತಿಸಲಾಗಿದೆ.

ಬಂಧಿತರಿಂದ 2.21 ಲಕ್ಷ ರೂ. ಮೌಲ್ಯದ 22 ಬ್ಯಾಟರಿ, ಮೂರು ಕಾರು ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಶರೀಫ್ ಶಿರ್ವ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದು, ವಾಹನಗಳ ಬ್ಯಾಟರಿ ಕಳವು ಮಾಡುತಿದ್ದ ಬಗ್ಗೆ ಪಡುಬಿದ್ರಿ, ಶಿರ್ವ ಹಾಗೂ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್‍ಪಿ ಎನ್. ವಿಷ್ಣುವರ್ಧನ್, ಎಎಸ್‍ಪಿ ಕುಮಾರಚಂದ್ರ ನಿರ್ದೆಶನದಂತೆ, ಕಾರ್ಕಳ ಡಿವೈಎಸ್‍ಪಿ ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ ಕಾಪು ಇನ್ಸ್‍ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪಿಎಸ್‍ಐ ತಿಮ್ಮೇಶ್, ರಾಘವೇಂದ್ರ, ತಂಡದ ಪ್ರವೀಣ್ ಕುಮಾರ್, ನಾರಾಯಣ, ರಾಜೇಶ್, ಹೇಮರಾಜ್, ಸಂದೇಶ, ಆನಂದ ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು