12:10 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ

28/05/2021, 16:41

ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ಸಲಹೆಗಾರ ಅಂಕಿತ್ ಸುವರ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇಂದಿನ ಮಹಾಮಾರಿಯಂತಹ  ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ವಿಚಲಿತವಾಗದಂತೆ ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯುವ ನಿಟ್ಟಿನಲ್ಲಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರೆ. ಫಾ. ಆಲ್ವಿನ್ ಸೆರಾವೊ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಕರೆಯಿಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಆರೋಗ್ಯವಂತ ಮನಸ್ಸು ಪರಿಪೂರ್ಣ ಬೆಳವಣಿಗೆಯ ಮೂಲ ಮಂತ್ರ, ಇನ್ನೊಬ್ಬರ ಭಾವನೆಗಳಿಗೆ ಸ್ಪಂದನೆ,ಧನಾತ್ಮಕ ಚಿಂತನೆ,ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಕೋವಿಡ್ ನ ಆತಂಕದ ದಿನಗಳ ಒತ್ತಡದಿಂದ ಪಾರಾಗಬಹುದು. ಎಂದು ತಿಳಿಸಿದರು.




ಪದುವ ಕಾಲೇಜಿನ ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಶನ್ ಸಾಂತುಮಯೋರ್ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದರು.
ಸಹ ಯೋಜನಾಧಿಕಾರಿ ರೇಷ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಅಕ್ಷಯ್ ವಂದಿಸಿದರು.
ಕಾಲೇಜಿನ ಪ್ರಾಧ್ಯಾಪಕಿ ಜೆಸ್ಫ್ರಿಡಾ ಮಿನೆಜಸ್ ತಾಂತ್ರಿಕ ನೆರವು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು