10:16 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ

28/05/2021, 16:41

ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ಸಲಹೆಗಾರ ಅಂಕಿತ್ ಸುವರ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇಂದಿನ ಮಹಾಮಾರಿಯಂತಹ  ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ವಿಚಲಿತವಾಗದಂತೆ ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯುವ ನಿಟ್ಟಿನಲ್ಲಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರೆ. ಫಾ. ಆಲ್ವಿನ್ ಸೆರಾವೊ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಕರೆಯಿಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಆರೋಗ್ಯವಂತ ಮನಸ್ಸು ಪರಿಪೂರ್ಣ ಬೆಳವಣಿಗೆಯ ಮೂಲ ಮಂತ್ರ, ಇನ್ನೊಬ್ಬರ ಭಾವನೆಗಳಿಗೆ ಸ್ಪಂದನೆ,ಧನಾತ್ಮಕ ಚಿಂತನೆ,ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಕೋವಿಡ್ ನ ಆತಂಕದ ದಿನಗಳ ಒತ್ತಡದಿಂದ ಪಾರಾಗಬಹುದು. ಎಂದು ತಿಳಿಸಿದರು.




ಪದುವ ಕಾಲೇಜಿನ ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಶನ್ ಸಾಂತುಮಯೋರ್ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದರು.
ಸಹ ಯೋಜನಾಧಿಕಾರಿ ರೇಷ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಅಕ್ಷಯ್ ವಂದಿಸಿದರು.
ಕಾಲೇಜಿನ ಪ್ರಾಧ್ಯಾಪಕಿ ಜೆಸ್ಫ್ರಿಡಾ ಮಿನೆಜಸ್ ತಾಂತ್ರಿಕ ನೆರವು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು