3:15 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಆಯುರ್ವೇದಕ್ಕೆ ಇದು ಅಮೃತ ಕಾಲ: ಖ್ಯಾತ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಅಭಿಮತ

02/11/2021, 18:52

ಮಂಗಳೂರು(reporterkarnataka.com): ನಮ್ಮ ಪೂರ್ವಜರು ಸಹಸ್ರಾರು ವರ್ಷಗಳ ಇತಿಹಾಸವುಳ್ಳ ಆಯುರ್ವೇದ ಜೀವನ ಪದ್ಧತಿಗೆ ಮಹತ್ತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈಗ ಆಯುರ್ವೇದ ಪದ್ಧತಿಗೆ ಅಮೃತ ಕಾಲವಾಗಿದ್ದು, ದೇಶ ವಿದೇಶಗಳಲ್ಲಿ ಇದು ಅತ್ಯಂತ ಫಲಪ್ರದವೆಂಬ ವಿಶ್ವಾಸ ಮೂಡಿಬರುತ್ತಿದೆ ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಹೇಳಿದರು.

ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆಯು ನಮ್ಮ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಸೇವೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತನಾಡಿ, ಆಯುಷ್ ಇಲಾಖೆಯು ಆರೋಗ್ಯ ಇಲಾಖೆಯ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಜಿಲ್ಲೆಯ ಅಯುಷ್ ಒಂದೇ ತಂಡವಾಗಿ ಬಹಳ ಉತ್ತಮ ರೀತಿಯಲ್ಲಿ ಸೇವೆಗೈಯುತ್ತಿದೆ. ಕೋವಿಡ್ ಸಂಕಷ್ಟಗಳ ಸಂದರ್ಭದಲ್ಲಿ ಸುಮಾರು 48000 ಜನರ ಕರೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಚಿಕಿತ್ಸಾ ಸಲಹೆ ಹಾಗೂ ಆಯುಷ್ ಇಮ್ಯೂನಿಟಿ ಬೂಸ್ಟರ್ ವಿತರಣೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ.ಅಂಬಿಕಾ ನಾಯಕ್ ಅವರು ಆಯುರ್ವೇದಾನುಸಾರ ಆಹಾರ ತಯಾರಿಕೆ ಹಾಗೂ ಸೇವನಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಆಯುರ್ವೇದ ಆಹಾರದ ಬಗ್ಗೆ ವಿಶೇಷ ಪ್ರದರ್ಶನಕ್ಕೆ ಆರೋಗ್ಯ ಇಲಾಖಾಧಿಕಾರಿ ಡಾ.ರಾಜೇಶ್ ಚಾಲನೆ ನೀಡಿದರು. ಆಯುಷ್ ಇಲಾಖೆಯ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಾಯಿತು. ಆಶಾ ಕಾರ್ಯಕರ್ತರಿಗೆ ರೋಗನಿರೋಧಕ ಔಷಧ ಮತ್ತು ಇಮ್ಯೂನಿಟಿ ಬೂಸ್ಟರ್ ಗಳನ್ನು ವಿತರಿಸಲಾಯಿತು.

ಡಾ.ಗೋಪಾಲಕೃಷ್ಣ ನಾಯಕ್, ಶಿಕ್ಷಣ ಇಲಾಖೆಯ ಆಶಾ ನಾಯಕ್, ಡಾ.ಆಶಾ ಜ್ಯೋತಿ ರೈ ಮಾಲಾಡಿ, ಡಾ.ಶ್ರೀದೇವಿ ಭಟ್ ಉಪಸ್ಥಿತರಿದ್ದರು. 

ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಡಾ.ಶೋಭಾರಾಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು