6:41 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಆಯುರ್ವೇದಕ್ಕೆ ಇದು ಅಮೃತ ಕಾಲ: ಖ್ಯಾತ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಅಭಿಮತ

02/11/2021, 18:52

ಮಂಗಳೂರು(reporterkarnataka.com): ನಮ್ಮ ಪೂರ್ವಜರು ಸಹಸ್ರಾರು ವರ್ಷಗಳ ಇತಿಹಾಸವುಳ್ಳ ಆಯುರ್ವೇದ ಜೀವನ ಪದ್ಧತಿಗೆ ಮಹತ್ತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈಗ ಆಯುರ್ವೇದ ಪದ್ಧತಿಗೆ ಅಮೃತ ಕಾಲವಾಗಿದ್ದು, ದೇಶ ವಿದೇಶಗಳಲ್ಲಿ ಇದು ಅತ್ಯಂತ ಫಲಪ್ರದವೆಂಬ ವಿಶ್ವಾಸ ಮೂಡಿಬರುತ್ತಿದೆ ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಹೇಳಿದರು.

ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆಯು ನಮ್ಮ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಸೇವೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತನಾಡಿ, ಆಯುಷ್ ಇಲಾಖೆಯು ಆರೋಗ್ಯ ಇಲಾಖೆಯ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಜಿಲ್ಲೆಯ ಅಯುಷ್ ಒಂದೇ ತಂಡವಾಗಿ ಬಹಳ ಉತ್ತಮ ರೀತಿಯಲ್ಲಿ ಸೇವೆಗೈಯುತ್ತಿದೆ. ಕೋವಿಡ್ ಸಂಕಷ್ಟಗಳ ಸಂದರ್ಭದಲ್ಲಿ ಸುಮಾರು 48000 ಜನರ ಕರೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಚಿಕಿತ್ಸಾ ಸಲಹೆ ಹಾಗೂ ಆಯುಷ್ ಇಮ್ಯೂನಿಟಿ ಬೂಸ್ಟರ್ ವಿತರಣೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ.ಅಂಬಿಕಾ ನಾಯಕ್ ಅವರು ಆಯುರ್ವೇದಾನುಸಾರ ಆಹಾರ ತಯಾರಿಕೆ ಹಾಗೂ ಸೇವನಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಆಯುರ್ವೇದ ಆಹಾರದ ಬಗ್ಗೆ ವಿಶೇಷ ಪ್ರದರ್ಶನಕ್ಕೆ ಆರೋಗ್ಯ ಇಲಾಖಾಧಿಕಾರಿ ಡಾ.ರಾಜೇಶ್ ಚಾಲನೆ ನೀಡಿದರು. ಆಯುಷ್ ಇಲಾಖೆಯ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಾಯಿತು. ಆಶಾ ಕಾರ್ಯಕರ್ತರಿಗೆ ರೋಗನಿರೋಧಕ ಔಷಧ ಮತ್ತು ಇಮ್ಯೂನಿಟಿ ಬೂಸ್ಟರ್ ಗಳನ್ನು ವಿತರಿಸಲಾಯಿತು.

ಡಾ.ಗೋಪಾಲಕೃಷ್ಣ ನಾಯಕ್, ಶಿಕ್ಷಣ ಇಲಾಖೆಯ ಆಶಾ ನಾಯಕ್, ಡಾ.ಆಶಾ ಜ್ಯೋತಿ ರೈ ಮಾಲಾಡಿ, ಡಾ.ಶ್ರೀದೇವಿ ಭಟ್ ಉಪಸ್ಥಿತರಿದ್ದರು. 

ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಡಾ.ಶೋಭಾರಾಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು