8:47 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಆಯುರ್ವೇದಕ್ಕೆ ಇದು ಅಮೃತ ಕಾಲ: ಖ್ಯಾತ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಅಭಿಮತ

02/11/2021, 18:52

ಮಂಗಳೂರು(reporterkarnataka.com): ನಮ್ಮ ಪೂರ್ವಜರು ಸಹಸ್ರಾರು ವರ್ಷಗಳ ಇತಿಹಾಸವುಳ್ಳ ಆಯುರ್ವೇದ ಜೀವನ ಪದ್ಧತಿಗೆ ಮಹತ್ತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈಗ ಆಯುರ್ವೇದ ಪದ್ಧತಿಗೆ ಅಮೃತ ಕಾಲವಾಗಿದ್ದು, ದೇಶ ವಿದೇಶಗಳಲ್ಲಿ ಇದು ಅತ್ಯಂತ ಫಲಪ್ರದವೆಂಬ ವಿಶ್ವಾಸ ಮೂಡಿಬರುತ್ತಿದೆ ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಹೇಳಿದರು.

ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆಯು ನಮ್ಮ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಸೇವೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತನಾಡಿ, ಆಯುಷ್ ಇಲಾಖೆಯು ಆರೋಗ್ಯ ಇಲಾಖೆಯ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಜಿಲ್ಲೆಯ ಅಯುಷ್ ಒಂದೇ ತಂಡವಾಗಿ ಬಹಳ ಉತ್ತಮ ರೀತಿಯಲ್ಲಿ ಸೇವೆಗೈಯುತ್ತಿದೆ. ಕೋವಿಡ್ ಸಂಕಷ್ಟಗಳ ಸಂದರ್ಭದಲ್ಲಿ ಸುಮಾರು 48000 ಜನರ ಕರೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಚಿಕಿತ್ಸಾ ಸಲಹೆ ಹಾಗೂ ಆಯುಷ್ ಇಮ್ಯೂನಿಟಿ ಬೂಸ್ಟರ್ ವಿತರಣೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ.ಅಂಬಿಕಾ ನಾಯಕ್ ಅವರು ಆಯುರ್ವೇದಾನುಸಾರ ಆಹಾರ ತಯಾರಿಕೆ ಹಾಗೂ ಸೇವನಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಆಯುರ್ವೇದ ಆಹಾರದ ಬಗ್ಗೆ ವಿಶೇಷ ಪ್ರದರ್ಶನಕ್ಕೆ ಆರೋಗ್ಯ ಇಲಾಖಾಧಿಕಾರಿ ಡಾ.ರಾಜೇಶ್ ಚಾಲನೆ ನೀಡಿದರು. ಆಯುಷ್ ಇಲಾಖೆಯ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಾಯಿತು. ಆಶಾ ಕಾರ್ಯಕರ್ತರಿಗೆ ರೋಗನಿರೋಧಕ ಔಷಧ ಮತ್ತು ಇಮ್ಯೂನಿಟಿ ಬೂಸ್ಟರ್ ಗಳನ್ನು ವಿತರಿಸಲಾಯಿತು.

ಡಾ.ಗೋಪಾಲಕೃಷ್ಣ ನಾಯಕ್, ಶಿಕ್ಷಣ ಇಲಾಖೆಯ ಆಶಾ ನಾಯಕ್, ಡಾ.ಆಶಾ ಜ್ಯೋತಿ ರೈ ಮಾಲಾಡಿ, ಡಾ.ಶ್ರೀದೇವಿ ಭಟ್ ಉಪಸ್ಥಿತರಿದ್ದರು. 

ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಡಾ.ಶೋಭಾರಾಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು