9:53 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಾಲು ಸಾಲು ದೀಪಗಳ ಮಾಲೆ, ಆಕಾಶಬುಟ್ಟಿ: ದೀಪಾವಳಿ ಏನಿದರ ಅರ್ಥ?: ನಕರಾತ್ಮದಿಂದ ಸಕರಾತ್ಮವೇ?

03/11/2021, 07:50

ಅಸತೋಮ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ, ಅರ್ಥಾತ್ ನಮ್ಮ ಜೀವನದ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರಲಿ ಎಂದು ಸಂಭ್ರಮಿಸುವ ಒಂದು ವಿಶೇಷ ಪರ್ವ ದೀಪಾವಳಿ. 

ನಿಶೆಯನ್ನು ಹೊಡೆದೋಡಿಸುವುದು ಎಂಬ ಅರ್ಥವೂ ಇದೆ. ನಮ್ಮ ಮನದ ಋಣಾತ್ಮಕ ಭಾವಗಳನ್ನು ತೊರೆದು ಸಕಾರಾತ್ಮಕನ್ನು ಬೆಳಗಿಸಲು ದೀಪಗಳನ್ನು ಬೆಳಗುತ್ತೇವೆ. ದೀಪಾವಳಿ ಎಂದರೆ ತಕ್ಷಣ ನೆನಪಿಗೆ ಬರುವುದು ಸಾಲು ಸಾಲು ದೀಪಗಳ ಸಾಲು, ಆಕಾಶಬುಟ್ಟಿ, ಪ್ರತಿನಿತ್ಯ ಮನೆಯಲ್ಲಿ ಬೆಳಗುವ ದೀಪ ಜೀವನದ ಆಶೋತ್ತರಗಳ ದ್ಯೋತಕ. 

ನಮ್ಮ ಸಂಸ್ಕೃತಿಯಲ್ಲಿ ಯಾವುದೇ ಶುಭ ಸಮಾರಂಭ ಆರಂಭವಾಗುವುದು ದೀಪ ಬೆಳಗುವ ಮೂಲಕ. ಇಲ್ಲಿ ಬೆಳಕನ್ನು ಜೀವನ ವೃದ್ಧಿಯ ದ್ಯೋತಕವಾಗಿ ಕಾಣುತ್ತೇವೆ. ದೀಪದ ಬೆಳಕು ಯಾವಾಗಲೂ ಊರ್ಧ್ವ ಮುಖಿಯಾಗಿರುತ್ತದೆ. ಅಂದರೆ ನಾವು ದೀಪದಂತೆ ಉರಿದು ಇತರರ ಬಾಳಿಗೆ ಬೆಳಕು ನೀಡಬೇಕೆಂಬುದೇ ಆಶಯ.

ಕಾರ್ತಿಕ ಮಾಸದಲ್ಲಿ ಆಚರಿಸುವ ಈ ಹಬ್ಬದ ಜೊತೆಗೆ ಎಲ್ಲಾ ದೇವಾಲಯಗಳಲ್ಲಿಯೂ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ.

ಕಾರ್ತಿಕ ಮಾಸದುದ್ದಕ್ಕೂ ದೀಪೋತ್ಸವವನ್ನು ಆಚರಿಸಲಾಗುತ್ತದೆ.

ಭಾರತೀಯರಾದ ನಮಗೆ ದೀಪ ಎನ್ನುವುದು ಸೂರ್ಯನ ಪುಟ್ಟ ಪ್ರತಿರೂಪದಂತೆ.

ಜ್ಞಾನದ ಸಂಕೇತ ವೈರತ್ವದ ಮೇಲೆ ವಿಜಯ ಗಳಿಸಿದ ಸಂಕೇತ, ಮುಖ್ಯವಾಗಿ ನಮ್ಮೊಳಗಿನ ಎಲ್ಲಾ ದುರ್ಗುಣಗಳನ್ನು ಹೊಡೆದೋಡಿಸಿ ಬೆಳಕನ್ನು ಬೆಳಗಿಸುವ ಹಬ್ಬ.

 ಶ್ರೀರಾಮಚಂದ್ರನ ಪಟ್ಟಾಭಿಷೇಕ ನರಕಾಸುರನ ಸಂಹಾರ ಇದೆಲ್ಲವೂ ನಡೆದದ್ದು ಇದೇ ದಿನದಂದು.

ಒಟ್ಟಿನಲ್ಲಿ ದೀಪಾವಳಿಯೆಂದರೆ ಕರಾಳ ಶಕ್ತಿಗಳನ್ನು ಸಂಹರಿಸಿ ಎಲ್ಲರ ಬದುಕಿನಲ್ಲಿ ಬೆಳಕು ತಂದ ಪರ್ವದಿನ. ಈ ದೀಪಾವಳಿ ನಮಗೆಲ್ಲರಿಗೂ ಸುಖ ಸಮೃದ್ಧಿ ನೆಮ್ಮದಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ.

” ಲೋಕ ಸಮಸ್ತಾ  ಸುಖಿನೋ ಭವಂತು””

✍️

ಇತ್ತೀಚಿನ ಸುದ್ದಿ

ಜಾಹೀರಾತು