11:26 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಸಾಲು ಸಾಲು ದೀಪಗಳ ಮಾಲೆ, ಆಕಾಶಬುಟ್ಟಿ: ದೀಪಾವಳಿ ಏನಿದರ ಅರ್ಥ?: ನಕರಾತ್ಮದಿಂದ ಸಕರಾತ್ಮವೇ?

03/11/2021, 07:50

ಅಸತೋಮ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ, ಅರ್ಥಾತ್ ನಮ್ಮ ಜೀವನದ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರಲಿ ಎಂದು ಸಂಭ್ರಮಿಸುವ ಒಂದು ವಿಶೇಷ ಪರ್ವ ದೀಪಾವಳಿ. 

ನಿಶೆಯನ್ನು ಹೊಡೆದೋಡಿಸುವುದು ಎಂಬ ಅರ್ಥವೂ ಇದೆ. ನಮ್ಮ ಮನದ ಋಣಾತ್ಮಕ ಭಾವಗಳನ್ನು ತೊರೆದು ಸಕಾರಾತ್ಮಕನ್ನು ಬೆಳಗಿಸಲು ದೀಪಗಳನ್ನು ಬೆಳಗುತ್ತೇವೆ. ದೀಪಾವಳಿ ಎಂದರೆ ತಕ್ಷಣ ನೆನಪಿಗೆ ಬರುವುದು ಸಾಲು ಸಾಲು ದೀಪಗಳ ಸಾಲು, ಆಕಾಶಬುಟ್ಟಿ, ಪ್ರತಿನಿತ್ಯ ಮನೆಯಲ್ಲಿ ಬೆಳಗುವ ದೀಪ ಜೀವನದ ಆಶೋತ್ತರಗಳ ದ್ಯೋತಕ. 

ನಮ್ಮ ಸಂಸ್ಕೃತಿಯಲ್ಲಿ ಯಾವುದೇ ಶುಭ ಸಮಾರಂಭ ಆರಂಭವಾಗುವುದು ದೀಪ ಬೆಳಗುವ ಮೂಲಕ. ಇಲ್ಲಿ ಬೆಳಕನ್ನು ಜೀವನ ವೃದ್ಧಿಯ ದ್ಯೋತಕವಾಗಿ ಕಾಣುತ್ತೇವೆ. ದೀಪದ ಬೆಳಕು ಯಾವಾಗಲೂ ಊರ್ಧ್ವ ಮುಖಿಯಾಗಿರುತ್ತದೆ. ಅಂದರೆ ನಾವು ದೀಪದಂತೆ ಉರಿದು ಇತರರ ಬಾಳಿಗೆ ಬೆಳಕು ನೀಡಬೇಕೆಂಬುದೇ ಆಶಯ.

ಕಾರ್ತಿಕ ಮಾಸದಲ್ಲಿ ಆಚರಿಸುವ ಈ ಹಬ್ಬದ ಜೊತೆಗೆ ಎಲ್ಲಾ ದೇವಾಲಯಗಳಲ್ಲಿಯೂ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ.

ಕಾರ್ತಿಕ ಮಾಸದುದ್ದಕ್ಕೂ ದೀಪೋತ್ಸವವನ್ನು ಆಚರಿಸಲಾಗುತ್ತದೆ.

ಭಾರತೀಯರಾದ ನಮಗೆ ದೀಪ ಎನ್ನುವುದು ಸೂರ್ಯನ ಪುಟ್ಟ ಪ್ರತಿರೂಪದಂತೆ.

ಜ್ಞಾನದ ಸಂಕೇತ ವೈರತ್ವದ ಮೇಲೆ ವಿಜಯ ಗಳಿಸಿದ ಸಂಕೇತ, ಮುಖ್ಯವಾಗಿ ನಮ್ಮೊಳಗಿನ ಎಲ್ಲಾ ದುರ್ಗುಣಗಳನ್ನು ಹೊಡೆದೋಡಿಸಿ ಬೆಳಕನ್ನು ಬೆಳಗಿಸುವ ಹಬ್ಬ.

 ಶ್ರೀರಾಮಚಂದ್ರನ ಪಟ್ಟಾಭಿಷೇಕ ನರಕಾಸುರನ ಸಂಹಾರ ಇದೆಲ್ಲವೂ ನಡೆದದ್ದು ಇದೇ ದಿನದಂದು.

ಒಟ್ಟಿನಲ್ಲಿ ದೀಪಾವಳಿಯೆಂದರೆ ಕರಾಳ ಶಕ್ತಿಗಳನ್ನು ಸಂಹರಿಸಿ ಎಲ್ಲರ ಬದುಕಿನಲ್ಲಿ ಬೆಳಕು ತಂದ ಪರ್ವದಿನ. ಈ ದೀಪಾವಳಿ ನಮಗೆಲ್ಲರಿಗೂ ಸುಖ ಸಮೃದ್ಧಿ ನೆಮ್ಮದಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ.

” ಲೋಕ ಸಮಸ್ತಾ  ಸುಖಿನೋ ಭವಂತು””

✍️

ಇತ್ತೀಚಿನ ಸುದ್ದಿ

ಜಾಹೀರಾತು