6:41 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು