11:20 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು