8:59 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು