1:40 PM Saturday8 - August 2026
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು